text
stringlengths
0
2.67k
ಕೃತ್ತಿಕೆ (1946)
ಪಕ್ಷಿಕಾಶಿ (1946)
ಕಿಂಕಿಣಿ (ವಚನ ಸಂಕಲನ) (1946)
ಷೋಡಶಿ (1946)
ಚಂದ್ರಮಂಚಕೆ ಬಾ ಚಕೋರಿ (1957)
ಇಕ್ಷುಗಂಗೋತ್ರಿ (1957)
ಅನಿಕೇತನ (1963)
ಜೇನಾಗುವ (1964)
ಅನುತ್ತರಾ (1965)
ಮಂತ್ರಾಕ್ಷತೆ (1966)
ಕದರಡಕೆ (1967)
ಪ್ರೇತಕ್ಯೂ (1967)
ಕುಟೀಚಕ (1967)
ಹೊನ್ನ ಹೊತ್ತಾರೆ (1976)
ಕೊನೆಯ ತೆನೆ ಮತ್ತು ವಿಶ್ವಮಾನವ ಸಂದೇಶ (1981)
ಕಥಾ ಸಂಕಲನ
ಸಂನ್ಯಾಸಿ ಮತ್ತು ಇತರ ಕಥೆಗಳು (1936)
ನನ್ನ ದೇವರು ಮತ್ತು ಇತರ ಕಥೆಗಳು (1940)
ಕಾದಂಬರಿಗಳು
ಕಾನೂರು ಹೆಗ್ಗಡತಿ (1936)
ಮಲೆಗಳಲ್ಲಿ ಮದುಮಗಳು (1967)
ನಾಟಕಗಳು
ಯಮನ ಸೋಲು (1928)
ಜಲಗಾರ (1928)
ಬಿರುಗಾಳಿ (1930)
ವಾಲ್ಮೀಕಿಯ ಭಾಗ್ಯ (1931)
ಮಹಾರಾತ್ರಿ (1931)
ಸ್ಶಶಾನ ಕುರುಕ್ಷೇತ್ರಂ (1931)
ರಕ್ತಾಕ್ಷಿ (1933)
ಶೂದ್ರ ತಪಸ್ವಿ (1944)
ಬೆರಳ್‍ಗೆ ಕೊರಳ್ (1947)
ಬಲಿದಾನ (1948)
ಚಂದ್ರಹಾಸ (1963)
ಕಾನೀನ (1974)
ಪ್ರಬಂಧ
ಮಲೆನಾಡಿನ ಚಿತ್ರಗಳು (1933)
ವಿಮರ್ಶೆ
ಕಾವ್ಯವಿಹಾರ (1946)
ತಪೋನಂದನ (1950)
ವಿಭೂತಿಪೂಜೆ (1953)
ದ್ರೌಪದಿಯ ಶ್ರೀಮುಡಿ (1960)
ರಸೋ ವೈ ಸಃ (1963)
ಇತ್ಯಾದಿ (1970)
ಆತ್ಮಕಥೆ
ನೆನಪಿನ ದೋಣಿಯಲ್ಲಿ: ಕುವೆಂಪು ಮದುವೆ ಪ್ರಸಂಗ
ಜೀವನ ಚರಿತ್ರೆಗಳು
ಸ್ವಾಮಿ ವಿವೇಕಾನಂದ
ರಾಮಕೃಷ್ಣ ಪರಮಹಂಸ
ಅನುವಾದ
ಗುರುವಿನೊಡನೆ ದೇವರಡಿಗೆ (ಭಾಗ 1, 2) (1954)
ಕೊಲಂಬೋ ಇಂದ ಆಲ್ಮೋರಕೆ
ಭಾಷಣ-ಲೇಖನ
ಸಾಹಿತ್ಯ ಪ್ರಚಾರ (1930)
ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ (1944)
ಷಷ್ಠಿನಮನ (1964)
ಮನುಜಮತ-ವಿಶ್ವಪಥ (1971)
ವಿಚಾರ ಕ್ರಾಂತಿಗೆ ಆಹ್ವಾನ (1976)
ಶಿಶು ಸಾಹಿತ್ಯ
ಅಮಲನ ಕಥೆ (1924)
ಮೋಡಣ್ಣನ ತಮ್ಮ (ನಾಟಕ) (1926)
ಹಾಳೂರು (1926)
ಬೊಮ್ಮನಹಳ್ಳಿಯ ಕಿಂದರಿಜೋಗಿ (1928)
ನನ್ನ ಗೋಪಾಲ (ನಾಟಕ) (1930)
ನನ್ನ ಮನೆ (1946)
ಮೇಘಪುರ (1947)
ಮರಿವಿಜ್ಞಾನಿ (1947)
ನರಿಗಳಿಗೇಕೆ ಕೋಡಿಲ್ಲ (1977)
ಇತರೆ
ಜನಪ್ರಿಯ ವಾಲ್ಮೀಕಿ ರಾಮಾಯಣ
ಆಯ್ದ ಸಂಕಲನಗಳು
ಕನ್ನಡ ಡಿಂಡಿಮ (1968)
ಕಬ್ಬಿಗನ ಕೈಬುಟ್ಟಿ (1973)
ಪ್ರಾರ್ಥನಾ ಗೀತಾಂಜಲಿ (1972)
ನುಡಿನಮನ
ಜ್ಞಾನಪೀಠ ಪ್ರಶಸ್ತಿ ಉಲ್ಲೇಖ
ಕುವೆಂಪು ಅವರು ಸಾಹಿತ್ಯ ಬೃಹನ್ಮೂರ್ತಿ; ಕಾವ್ಯಮೀಮಾಂಸೆಯ ಯಾವೂಂದು ಸರಳ ಸೂತ್ರವೂ ಅವರನ್ನು ಸಂಪೂರ್ಣವಾಗಿ ವಿವರಿಸಲಾರದು - ಏಕೆಂದರೆ, ಅವರ ಕೃತಿಗಳು ನಗ್ನ ಸತ್ಯವನೆಂತೊ ಅಂತೇ ಅತೀತ ಸತ್ಯವನ್ನೂ ಅನಾವರಣಗೊಳಿಸುತ್ತವೆ. ಸೃಜನಾತ್ಮಕ ಜೀವನಚರಿತ್ರೆ, ಸಾಹಿತ್ಯ ವಿಮರ್ಶೆ, ಕಾವ್ಯಮೀಮಾಂಸೆ, ನಾಟಕ ಮತ್ತು ಕತೆ ಕಾದಂಬರಿಯ ಕ್ಷೇತ್ರಗಳಿಗೆ ಪುಟ್ಟಪ್ಪನವರ ಕೊಡುಗೆ ಸ್ಮರಣೀಯವಾದುದು. ಅವರದು ವ್ಯಷ್ಠಿ ವಾಣಿಯಲ್ಲ; ಯುಗಧರ್ಮ, ಜನಾಂಗ ಧರ್ಮಗಳ ವಾಣಿ. ಅವರು ಬಹುಕಾಲ ತಮ್ಮ ಸಾಹಿತ್ಯದ ಮೂಲಕ ಚಿರಂಜೀವಿಯಾಗಿ ಇರುತ್ತಾರೆ.
ಬಿ.ಎಂ.ಶ್ರೀ.
ನೂರು ದೋಷಗಳಿದ್ದರೂ ಕಾವ್ಯವು ಕಾವ್ಯವೇ, ಒಂದು ತಪ್ಪಿಲ್ಲದಿದ್ದರೂ ಜೀವವಿಲ್ಲದ ಕಾವ್ಯ ಕಾವ್ಯವೇ ಅಲ್ಲ, ಪುಟ್ಟಪ್ಪನವರ ಉತ್ತಮ ಕವನಗಳಲ್ಲಿ ಈ ಜೀವವಿದೆ; ಇರುವುದರಿಂದಲೇ ಅವುಗಳಲ್ಲಿ ಅಮೃತತ್ವದ ಸಾರವಿದೆ.
ದ.ರಾ.ಬೇಂದ್ರೆ
ಯುಗದ ಕವಿಗೆ
ಜಗದ ಕವಿಗೆ
ಶ್ರೀ ರಾಮಾಯಣ ದರ್ಶನದಿಂದಲೇ ಕೈ
ಮುಗಿದ ಕವಿಗೆ – ಮಣಿಯದವರು ಯಾರು?
ರಾಮಕೃಷ್ಣ ವಚನೋದಿತ ಪ್ರತಿಭೆ ತೆರೆದ
ಕವನ ತತಿಗೆ ತಣಿಯದವರು ಆರು?
ಮಲೆನಾಡಿನ ಸೌಂದರ್ಯಕೆ ಕುಣಿದಾಡಿದ
ಕವಿಯ ಜತೆಗೆ ಕುಣಿಯದವರು ಆರು?
ಕನ್ನಡಿಸಲಿ ಶಿವ ಜೀವನ
ಮುನ್ನಡೆಸಲಿ ಯುವ-ಜನ-ಮನ
ಇದೆ ಪ್ರಾರ್ಥನೆ ನಮಗೆ
ತಮವೆಲ್ಲಿದೆ ರವಿಯಿದಿರಿಗೆ?
ಉತ್ತಮ ಕವಿ ನುಡಿ – ಚದುರಗೆ
ಚಾರುತ್ವದ ಕುಂದಣದಲಿ
ಚಾರಿತ್ರ್ಯದ ರತ್ನ
ಚಾತುರ್ಯದ ಮಂತಣದಲಿ
ಸತ್ಸಂಗದ ಯತ್ನ
ಇದೆ ತೃಪ್ತಿಯು ನಿಮಗೆ