text
stringlengths
0
2.67k
1758 ರಲ್ಲಿ ದಳವಾಯಿ ದೇವರಾಜ ಮೃತಪಟ್ಟ ಹಾಗೂ ಅರಮನೆಯ ಅಂತಃಕಲಹಗಳು ಮಹಾರಾಜರ ವಂಶಸ್ಥರು ನಂಜರಾಜನನ್ನು ಪದಚ್ಯುತಗೊಳಿಸಲು ಎದಿರುನೋಡುತ್ತಿದ್ದರು. ಹೈದರನ್ನು ಇದಕ್ಕೆ ಬಳಸಿಕೊಂಡು ಕೆಲವು ಗ್ರಾಮಗಳನ್ನು ನಂಜರಾಜನಿಗೆ ಉಂಬಳಿಯನ್ನಿತ್ತು ಅವನನ್ನೂ ಅಧಿಕಾರದಿಂದ ದೂರ ಮಾಡಲಾಯಿತು.[೫] ಅಲ್ಲಿಗೆ ಮೈಸೂರು ಅರಮನೆಯ ಎರಡು ಪಿಡುಗುಗಳು ದೂರವಾದವು. ಹೈದರ್‌ ಮೈಸೂರಿನ ಸರ್ವಾಧಿಕಾರಿಯಾದ. 1758-1761 ರ ವರೆಗಿನ ಮೂರು ವರ್ಷಗಳ ಅವಧಿಯನ್ನು ಸ್ವಲ್ಪ ಮಟ್ಟಿಗೆ ರಾಜ್ಯ ವಿಸ್ತಾರಕ್ಕೂ, ಮೈಸೂರು ರಾಜ್ಯದ ಮೇಲೆ ಹಿಡಿತ ಸಾಧಿಸುವುದಕ್ಕೂ ಬಳಸಿಕೊಂಡ.
ಬೆಂಗಳೂರಿನ ಮುತ್ತಿಗೆ
ಬದಲಾಯಿಸಿ
ಮರಾಠರು ಬೆಂಗಳೂರು, ಚನ್ನಪಟ್ಟಣ ಮೊದಲಾದ ಪ್ರದೇಶಗಳನ್ನು ವಶಪಡಿಸಿಕೊಂಡು ತಮ್ಮ ಹಿಡಿತದಲ್ಲಿಟ್ಟುಕೊಳ್ಳಲಾರಂಭಿಸಿದರು. 1758 ರಲ್ಲಿ ಹೈದರ್‌ ಮರಾಠರನ್ನು ಬೆಂಗಳೂರು ಮತ್ತು ಚೆನ್ನಪಟ್ಟಣಗಳಿಂದ ಹೊರದೂಡುವಲ್ಲಿ ಯಶಸ್ವಿಯಾದ. 1759ರ ಹೊತ್ತಿಗೆ ಹೈದರ್‌ ಸಂಪೂರ್ಣ ಮೈಸೂರು ಸೇನೆಯ ಅಧಿಪತಿಯಾಗಿದ್ದ.[೬]
ಮೈಸೂರಿನ ನವಾಬನಾಗಿ
ಬದಲಾಯಿಸಿ
ಚಿಕ್ಕಕೃಷ್ಣರಾಜರು ಹೈದರನ ಶೌರ್ಯ-ಸಾಹಸಗಳಿಗೆ ಅವನಿಗೆ ಫತೇ ಹೈದರ್‌ ಬಹದ್ದೂರ್‌ ಎಂಬ ಬಿರುದನ್ನಿತ್ತು ಗೌರವಿಸಿದರು.[೭] ಅದೇ ವೇಳೆಗೆ ನಂಜರಾಜನನ್ನೂ ಅಧಿಕಾರದಿಂದ ಪದಚ್ಯುತಗೊಳಿಸಲಾಗಿತ್ತು. ಹೈದರ್‌ 1759ರ ವೇಳೆಗೆ ನವಾಬ್‌ ಹುದ್ದೆಗೇರಿದ ಮೈಸೂರಿನ ಮೊದಲಿಗನಾದ.
ಖಂಡೇರಾಯನ ಬಂಡಾಯ
ಬದಲಾಯಿಸಿ
ಮೈಸೂರು ರಾಜಮಾತೆಯೂ, ಸೈನಿಕ ಕಾರ್ಯದರ್ಶಿ ಖಂಡೇರಾಯನೂ ಕ್ರಮೇಣ ಹೈದರ್‌ ಮುಸಲ್ಮಾನನೆಂದೂ, ಅವನ ಏಳಿಗೆಯನ್ನು ಸಹಿಸಲಾರದೆಯೂ ಒಳಸಂಚು ರೂಪಿಸಿ, 1760 ಆಗಸ್ಟ್‌ ನಲ್ಲಿ ಮರಾಠರು ಶ್ರೀರಂಗಪಟ್ಟಣದ ಮೇಲೆ ದಾಳಿ ಮಾಡುತ್ತಾರೆಂದು ತಿಳಿದಿದ್ದ ಖಂಡೇರಾಯ 12ನೇ ಆಗಸ್ಟ್‌ 1760 ಹೈದರನ ಶಿಭಿರದ ಮೇಲೆಯೇ ಶ್ರೀರಂಗಪಟ್ಟಣ ಕೋಟೆಯಿಂದ ಗುಂಡು ಹಾರಿಸಲು ಶುರು ಮಾಡಿದ್ದ. ಆದರೆ ಹೈದರ್‌ ಇದರಿಂದ ತಪ್ಪಿಸಿಕೊಂಡು ಸೇನೆಯನ್ನೂ ರಕ್ಷಿಸಿದ. ಇನ್ನೊಂದೆಡೆ ಖಂಡೇರಾಯನ ನಿರೀಕ್ಷೆಯಂತೆ ಮರಾಠರೂ ದಾಳಿ ಮಾಡಲಿಲ್ಲ. ಆ ಸಂದರ್ಭ ಹೈದರ್‌ ಅಪಾಯದಿಂದ ಪಾರಾಗಲು ತಾತ್ಕಾಲಿಕ ಒಪ್ಪಂದವೊಂದನ್ನು ಖಂಡೇರಾಯನೊಂದಿಗೆ ಮಾಡಿಕೊಂಡ. ಮುಂದುವರಿದು, ಚದುರಿದ್ದ ಸೇನೆಯನ್ನು ಸಂಘಟಿಸಿ, ಫ್ರೆಂಚ್‌ ಸೇನಾ ನೆರವನ್ನೂ ಪಡೆದು ಗಡಿಯಂಚಿನ ಪ್ರದೇಶಗಳನ್ನು ವಶಪಡಿಸಿಕೊಳ್ಲುವಲ್ಲಿ ನಿರತನಾದ. ಕೊಯಮತ್ತೂರು ಮತ್ತು ಸೇಲಂ ಪ್ರದೇಶಗಳನ್ನು ಗೆದ್ದುಕೊಂಡ. ಆದರೂ ಖಂಡೇರಾಯನನ್ನು ಎದುರಿಸಲು ಹೈದರ್‌ ಶಕ್ತನಾಗಿರಲಿಲ್ಲ. ಕೊನೆಗೆ ನಿವೃತ್ತ ಸರ್ವಾಧಿಕಾರಿ ನಂಜರಾಜನ ನೆರವನ್ನು ಪಡೆದು ದಾಳಿಯೆಸಗಿ ಶ್ರೀರಂಗಪಟ್ಟಣವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾದ ಹಾಗೂ ಮೈಸೂರಿನ ಸುಲ್ತಾನನಾದ.[೮]
ಮೈಸೂರಿನ ಸುಲ್ತಾನನಾಗಿ
ಬದಲಾಯಿಸಿ
ಖಂಡೇರಾಯನ ಬಂಡಾಯವನ್ನು ಸಮರ್ಥವಾಗಿ ಅಡಗಿಸಿದ ಹೈದರ್‌ ಮೈಸೂರು ರಾಜ್ಯದ ಸಂಪೂರ್ಣ ಹಿಡಿತ ಕೈಗೆತ್ತಿಕೊಂಡ. ಈ ಮಧ್ಯೆ 1761 ರ ಮೂರನೇ ಪಾಣಿಪತ್‌ ಕದನದಲ್ಲಿ ಮರಾಠಾ ಒಕ್ಕೂಟ ಅಹ್ಮದ್‌ ಷಾ ಅಬ್ದಾಲಿಯ ಸೇನೆಯೆದುರು ಸಂಪೂರ್ಣವಾಗಿ ಸೋತುಹೊಗಿತ್ತು. ಇನ್ನೊಂದೆಡೆ 1764ರ ಬಕ್ಸಾರ್‌ ಕದನದಲ್ಲಿ ಮೀರ್‌ ಖಾಸಿಂ ನೆರವಿಗೆ ನಿಂತು ಸೋತಿದ್ದ ಮೊಘಲ್‌ ದೊರೆ ಎರಡನೇ ಷಾ ಆಲಂ 1765ರ ಒಪ್ಪಂದದಂತೆ ಇಂಗ್ಲೀಷ್‌ ಈಸ್ಟ್‌ ಇಂಡಿಯಾ ಕಂಪನಿಯ ಕೈಗೊಂಬೆಯಾಗಿದ್ದ. ಕುಸಿದ ಪ್ರಭಲ ಸಾಮ್ರಾಜ್ಯಗಳ ಲಾಭ ಪಡದ ಹೈದರ್‌ 1761 ರಲ್ಲಿ ದಖ್ಖನ್ನಿನ ಮೊಘಲ್‌ ರಾಜಧಾನಿ ಶಿರಾವನ್ನೂ, ಮುಂದುವರಿದು ಶಿರಾದ ಸುತ್ತಮುತ್ತಲ ಪ್ರಾಂತ್ಯಗಳನ್ನೂ (ಹೊಸಕೋಟೆ, ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ, ಪೆನುಕೊಂಡ ಮಡಕಶಿರಾ, ನಂದಿದುರ್ಗ, ಹರಪನಹಳ್ಳಿ ಮತ್ತು ಚಿತ್ರದುರ್ಗ) ಜಯಿಸಿದ. ಅಪಾರ ಪ್ರಾಕೃತಿಕ ಸಂಪನ್ಮೂಲಗಳನ್ನು ಹೊಂದಿದ್ದ ಬಿದನೂರು ವಿಜಯ ಇವನ ವಿಜಯಗಳಲ್ಲೇ ಅತೀ ಪ್ರಮುಖವಾದದ್ದು. ಹೊನ್ನಾವರದಿಂದ ಪಶ್ಚಿಮ ತೀರಕ್ಕೂ, ಗೋವೆಯ ವರೆಗೂ ಸಾಮ್ರಾಜ್ಯ ವಿಸ್ತರಿಸಿಕೊಂಡ. ಡಚ್ಚರ ನೆರವನ್ನು ಪಡೆದು ನೌಕಾಪಡೆಯನ್ನು ಬಲಗೊಳಿಸಿ ನಾಯರ್ ಗಳಿಂದ ಮಲಬಾರ್‌ ವಶಪಡಿಸಿಕೊಂಡ.[೯]
ಪ್ರಥಮ ಆಂಗ್ಲೋ-ಮೈಸೂರು ಯುದ್ಧ
ಬದಲಾಯಿಸಿ
ಬಕ್ಸಾರ್‌ ಕದನದ ವಿಜಯದ ನಂತರ ಹೆಕ್ಟೇರ್‌ ಮನ್ರೋ ನೇತೃತ್ವದ ಈಸ್ಟ್‌ ಇಂಡಿಯಾ ಕಂಪನಿ ಎರಡನೇ ಷಾ ಆಲಂ ಮತ್ತು ಮೈಸೂರಿನ ನವಾಬನನ್ನು ಮಣಿಸಲು ಮರಾಠ ಒಕ್ಕೂಟಕ್ಕೆ ನೆರವನ್ನು ನೀಡಲು ಮುಂದಾಯಿತು. ಅಲ್ಲದೇ ಮೈಸೂರು-ಮರಾಠರ ಸೆಣೆಸಾಟಗಳು, ತನ್ನ ವೈರಿ ಫ್ರೆಂಚ್‌ ಸೇನಾ ನೆರವಿನೊಂದಿಗೆ ದಖ್ಖನ್ನಿನಲ್ಲಿ ಪ್ರಬಲನಾಗಿ ಬೆಳೆಯುತ್ತಿದ್ದ ಹೈದರ್ ಏಳಿಗೆಯು ಬ್ರಿಟೀಷ್ ವ್ಯಾಪಾರಿ ಕಂಪನಿಯ‌ ಯುದ್ಧಪ್ರವೇಶಕ್ಕೆ ನಾಂದಿ ಹಾಡಿದವು. ಮೈಸೂರಿನ ಸಾಂಪ್ರದಾಯಿಕ ವೈರಿ ಮರಾಠರು ಮತ್ತು ಹೈದರಾಬಾದಿನ ನಿಜಾಮನೊಂದಿಗೆ ಒಕ್ಕೂಟ ರಚಿಸಿಕೊಂಡ ಬ್ರಿಟೀಷರು 1766 ರಲ್ಲಿ ಹೈದರನ ವಿರುದ್ಧ ದಾಳಿಯೆಸಗಿದರು. ಆದರೆ ಚಾಣಾಕ್ಷತೆಯಿಂದ ಒಕ್ಕೂಟವನ್ನು ಒಡೆದು ಬ್ರಿಟೀಷರನ್ನು ಮಣಿಸಿದ ಹೈದರ್‌ 1770 ರಲ್ಲಿ ಶಾಂತಿ ಒಪ್ಪಂದಕ್ಕೆ ಸಹಿ ಹಾಕುವಂತೆ ಆದೇಶಿಸಿದನು. ವಿಧಿಯಿಲ್ಲದೇ ಬ್ರಿಟೀಷರು ಮದ್ರಾಸ್‌ ಒಪ್ಪಂದಕ್ಕೆ 1770 ರಲ್ಲಿ ಸಹಿ ಹಾಕಬೇಕಾಯಿತು. ಇದು ಬ್ರಿಟೀಷರಿಗೆ ಅವಮಾನಕರವೂ, ಹೈದರನಿಗೆ ಪ್ರಖ್ಯಾತಿಯನ್ನೂ ತಂದುಕೊಟ್ಟ ಒಪ್ಪಂದವಾಗಿತ್ತು.
ಮರಾಠಾ ಒಕ್ಕೂಟದ ವಿರುದ್ಧ ಯುದ್ಧ
ಬದಲಾಯಿಸಿ
ಮೊದಲನೇ ಆಂಗ್ಲೋ ಮೈಸೂರು ಯುದ್ಧದಿಂದ ಮರಾಠರಿಗೇನೂ ಲಾಭವಾಗಲಿಲ್ಲ. ಬದಲಾಗಿ ಮೈಸೂರಿನ ಮೇಲಿನ ಹಗೆತನ ಇನ್ನಷ್ಟು ಹೆಚ್ಚಾಯಿತು. 1770 ರ ಜನವರಿಯಲ್ಲಿ ಮರಾಠರು ಹೈದರನ ವಿರುದ್ಧ ದಂಡೆತ್ತಿ ಬಂದಾಗ ಮದ್ರಾಸು ಒಪ್ಪಂದದ ಕರಾರಿನಂತೆ ಇವನಿಗೆ ಬ್ರಿಟೀಷರು ಸೇನಾ ನೆರವನ್ನು ನೀಡಲಿಲ್ಲ. ಆದರೂ ಮರಾಠರನ್ನು ಯಶಸ್ವಿಯಾಗಿ ಸೋಲಿಸಿ, ಕೃಷ್ಣಾನದಿಯ ತನಕ ತನ್ನ ಎಲ್ಲೆಯನ್ನು ವಿಸ್ತರಿಸುವಲ್ಲಿ ಯಶಸ್ವಿಯಾದ ಹಾಗೂ ಕೊಡಗನ್ನು ವಶಕ್ಕೆ ಪಡೆದುಕೊಂಡ.
ದ್ವಿತೀಯ ಆಂಗ್ಲೋ-ಮೈಸೂರು ಯುದ್ಧ
ಬದಲಾಯಿಸಿ
ಮರಾಠರ ದಾಳಿಗಳ ಸಂದರ್ಭ ಮದ್ರಾಸು ಒಪ್ಪಂದದಂತೆ, ದಾಳಿಗಳ ಸಂದರ್ಭ ನೀಡಬೇಕಿದ್ದ ಯಾವುದೇ ಸೇನಾ ನೆರವನ್ನು ಬ್ರಿಟೀಷರು ಹೈದರಾಲಿಗೆ ನೀಡಲಿಲ್ಲ. ಅಲ್ಲದೇ ಗುಂಟೂರು ಆಕ್ರಮಣದಿಂದಾಗಿ ಹೈದರಾಬಾದಿನ ನಿಜಾಮನ ಮೇಲೂ, ಒಪ್ಪಂದಗಳ ಉಲ್ಲಂಘನೆಗಾಗಿ ಮರಾಠಾ ಒಕ್ಕೂಟ ಮೇಲೂ ಬ್ರಿಟೀಷರು ಕೊಪಗೊಂಡಿದ್ದರು.[೧೦] ಈ ವೇಳೆಗೆ ಮೊದಲ ಆಂಗ್ಲೋ ಮರಾಠ ಯುದ್ಧ ಆಂರಂಭವಾಗಿತ್ತು(1775). ಬ್ರಿಟೀಷರನ್ನು ಮಣಿಸಲು ಮರಾಠರು ಹೈದರನಿಗೆ ಬೆಂಬಲವಿತ್ತರು. ನಿಜಾಮನ ಬೆಂಬಲವನ್ನೂ ಪಡೆದುಕೊಂಡ ಹೈದರ್‌ ಒಕ್ಕೂಟ ರಚಿಸಿಕೊಂಡು ತಮಿಳುನಾಡಿಗೆ ಕ್ಷಿಪ್ರದಾಳಿಯಿತ್ತು ಬ್ರಿಟೀಷರ ವಿರುದ್ಧ ಘಟಿಸಿದ ಯುದ್ಧದಲ್ಲಿ ಜಯಗಳಿಸಿದ ಮತ್ತು ಆರ್ಕಾಟ್ ಅನ್ನು ಆಕ್ರಮಿಸಿದ.[೧೧] ಮುಂದುವರಿದು ಹೈದರ್‌ ಮತ್ತು ಟಿಪ್ಪು ನೇತೃತ್ವದ ಸೇನೆಗಳು ಪೊಲ್ಲಿಲೂರು ಕದನದಲ್ಲಿ ಬೇಲಿ ನೇತೃತ್ವದ ಕಂಪನಿ ಸೇನೆಯನ್ನು ಸೋಲಿಸಿ ಸೆರೆಹಿಡಿದವು. ನಂತರ ಐರ್ ಕೂಟನ ವಿರುದ್ಧ ನಡೆದ ಯುದ್ಧಗಳಲ್ಲಿ (ಪೋರ್ಟೊ ನೋವೋ ಕದನ) ಹೈದರ್‌ ಸೋಲನುಭವಿಸಬೇಕಾಯಿತು ಆದರೂ ತಂಜಾವೂರಿನ ಮುತ್ತಿಗೆಯಲ್ಲಿ ಯಶಸ್ವಿಯಾದ.
ಮರಣ
ಬದಲಾಯಿಸಿ
ಬ್ರಿಟೀಷರೊಂದಿಗಿನ ಸೆಣೆಸಾಟಗಳು ಮುಗಿಯುವ ಮೊದಲೇ ಹೈದರ್‌ ವಿಪರೀತ ಬೆನ್ನುಹುರಿ ಹುಣ್ಣಿನಿಂದ(ಬೆನ್ನುಫಣಿ ರೋಗ)) ಬಳಲಬೇಕಾಯಿತು. ಅದು ಡಿ.7 1782 ರಲ್ಲಿ ಅವನನ್ನು ಚಿತ್ತೂರು ಬಳಿಯ ಸೇನಶಿಬಿರದಲ್ಲಿ ಬಲಿಪಡೆದುಕೊಂಡಿತು. ಹೈದರನನ್ನು ಶ್ರೀರಂಗಪಟ್ಟಣದಲ್ಲಿ ಸಮಾಧಿಮಾಡಲಾಯಿತು ಮತ್ತು 1782-84 ರ ಅವಧಿಯಲ್ಲಿ ಅವನ ಮಗ ಟಿಪ್ಪು ಸುಲ್ತಾನ್ ಗುಂಬಜ್ ನಿರ್ಮಿಸಿದ.
ನೋಡಿ
ಬದಲಾಯಿಸಿ
ಟಿಪ್ಪು ಸುಲ್ತಾನ್
ಉಲ್ಲೇಖಗಳು
ಬದಲಾಯಿಸಿ
ವಿಕಿಪೀಡಿಯ
ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ.
ಖಾಸಗಿ ಮಾಹಿತಿಯ ಬಗ್ಗೆ ನಿಲುವು ಬಳಕೆಯ ನಿಬಂಧನೆಗಳುಡೆಸ್ಕ್‌ಟಾಪ್
ವಿಕಿಪೀಡಿಯ
ವಿಕಿಪೀಡಿಯ ಅನ್ನು ಹುಡುಕಿ
[ಮರೆಮಾಡಲು]
ಬರೆಯುವಾಗ ಕೀಲಿಮಣೆ ಐಕಾನ್ ಒತ್ತಿ ಕನ್ನಡ ಆಯ್ದುಕೊಳ್ಳುವುದರ ಅಥವಾ Ctrl+M ಒತ್ತುವುದರ ಮೂಲಕ ಈಗ ನೇರವಾಗಿ ಕನ್ನಡದಲ್ಲಿ ಬರೆಯಬಹುದು! ವಿವರಗಳಿಗೆ ಈ ಪುಟ ನೋಡಿ.
ಎರಡನೆಯ ಮೈಸೂರು ಯುದ್ಧ
ಭಾಷೆ
Download PDF
ವೀಕ್ಷಿಸಿ
ಸಂಪಾದಿಸಿ
ಎರಡನೆಯ ಮೈಸೂರು ಯುದ್ಧ (1780-1784) ಮೈಸೂರು ಸಂಸ್ಥಾನಕ್ಕೂ ಬ್ರಿಟಷರಿಗೂ ನಡೆದ ಯುದ್ಧದ ಸರಣಿಯಲ್ಲಿ ಎರಡನೆಯದು. ಅಮೆರಿಕದಲ್ಲಿ ನಡೆಯುತ್ತಿದ್ದ ಕ್ರಾಂತಿಕಾರಿ ಹೋರಾಟದ ಫಲವಾಗಿ ಬ್ರಿಟಷರು ಮತ್ತು ಫ್ರೆಂಚರ ನಡುವೆ ನಡೆದ ಕದನದ ಸುಳಿಯಲ್ಲಿ ಫ್ರೆಂಚರ ಸ್ನೇಹದಲ್ಲಿದ್ದ ಮೈಸೂರು ಕೂಡಾ ಸಿಕ್ಕಿತು. ಆ ಕಾಲದಲ್ಲಿ ಮೈಸೂರನ್ನು ಆಳುತ್ತಿದ್ದವನು ( ರಾಜಾ ಎಂಬ ಗೌರವನಾಮ ಇಲ್ಲದಿದ್ದರೂ) ಹೈದರ್‍ ಆಲಿ. ಹಿಂದೊಮ್ಮೆ ಮರಾಠರ ವಿರುದ್ಧದ ಯುದ್ಧದಲ್ಲಿ ಬ್ರಿಟಿಷರ ವಿಶ್ವಾಸಘಾತುಕತನವನ್ನು ಕಂಡು ಕಿಡಿಕಿಡಿಯಾಗಿದ್ದ ಹೈದರ್‍ ಆಲಿ ಬ್ರಿಟಿಷರೊಂದಿಗೆ ಸೇಡು ತೀರಿಸಿಕೊಳ್ಳಲು , ಫ್ರೆಂಚರ ಸಹಾಯಕ್ಕೆ ಒಮ್ಮನಸ್ಸಿನಿಂದ ಧುಮುಕಿದ. ೧೭೭೮ರಲ್ಲಿ ಬ್ರಿಟನ್ ಮೇಲೆ ಯುದ್ಧ ಸಾರಿದಾಗ, ಈಗಾಗಲೇ ಮದರಾಸಿನಲ್ಲಿ ಬಲವಾಗಿ ಬೇರುಬಿಟ್ಟಿದ್ದ ಬ್ರಿಟೀಷರು ,ಫ್ರೆಂಚರನ್ನು ಭಾರತದಿಂದ ಓಡಿಸುವ ಪಣ ತೊಟ್ಟರು. ಮಲಬಾರ್‍ ತೀರದ ಮಾಹೆಯನ್ನು ಗೆದ್ದುಕೊಂಡ ಬ್ರಿಟೀಷರು , ಹೈದರ ಆಶ್ರಿತನೊಬ್ಬನ ಕೆಲ ಭೂಭಾಗಗಳನ್ನೂ ಸ್ವಾಧೀನಕ್ಕೆ ತೆಗೆದುಕೊಂಡರು. ಸೇಡು ತೀರಿಸಿಕೊಳ್ಳಲು ಅವಕಾಶಕ್ಕಾಗಿ ಕಾಯುತ್ತಿದ್ದ ಹೈದರಾಲಿಯು , ಮರಾಠರು ತನ್ನಿಂದ ಕಿತ್ತುಕೊಂಡ ಪ್ರದೇಶಗಳನ್ನು ಮರುಪಡೆಯುವುದರಲ್ಲಿ ಯಶಸ್ವಿಯಾದನು. ಕೃಷ್ಣಾ ನದಿಯವರೆಗ ಹರಡಿದ್ದ ತನ್ನ ರಾಜ್ಯದಿಂದ , ಬೆಂಕಿ ಹೊತ್ತಿ ಉರಿಯುತ್ತಿದ್ದ ಗ್ರಾಮಗಳ ಮದ್ಯೆ , ಕಣಿವೆ, ಘಟ್ಟಗಳನ್ನು ಬಳಸಿಕೊಂಡು, ಮದರಾಸಿನಿಂದ ಕೇವಲ ೪೫ ಮೈಲಿ ( ೭೨ ಕಿ.ಮೀ) ದೂರದ ಕಾಂಜೀವರವನ್ನು ಒಂದಷ್ಟೂ ಪ್ರತಿರೋಧವಿಲ್ಲದೆ ತಲುಪಿದನು. ಮದರಾಸಿನ ಸೈಂಟ್ ಥಾಮಸ್ ಮೌಂಟಿನಲ್ಲಿ ೫೨೦೦ ಸೈನಿಕರೊಂದಿಗೆ ಬೀಡುಬಿಟ್ಟಿದ್ದ , ಸರ್‍ ಹೆಕ್ಟರ್‍ ಮನ್ರೋಗೆ ಬೆಂಕಿಯ ಜ್ವಾಲೆಗಳು ಕಾಣಿಸಿದ ನಂತರವೇ ಬ್ರಿಟೀಷರ ಪ್ರತಿಕ್ರಿಯೆಗೆ ಚಾಲನೆ ಸಿಕ್ಕಿತು. ಗುಂಟೂರಿಂದ ವಾಪಸು ಕರೆಸಿದ್ದ ಕರ್ನಲ್ ಬೈಲೀಯ ಕೈಕೆಳಗಿನ ಸಣ್ಣ ಸೈನ್ಯವನ್ನು ಹೈದರಾಲಿಯನ್ನು ಎದುರಿಸಲು ಕಳುಹಿಸಲಾಯಿತು. ಅಪ್ರತಿಮ ಧೈರ್ಯದಿಂದ ಕಾದಾಡಿದರೂ, ಬೈಲಿಯ ೨೮೦೦ ಜನರ ಸೇನೆ ಸಂಪೂರ್ಣ ಸೋಲಪ್ಪಿತು. ಆದಿನ ೧೭೮೦ರ ಸೆಪ್ಟೆಂಬರ್‍ ೧೦.
ಎರಡನೆಯ ಮೈಸೂರು ಯುದ್ಧ
Part of ಆಂಗ್ಲ-ಮೈಸೂರು ಯುದ್ಧಗಳು
ಯುದ್ಧದ ಮುಂಚೆ ದಕ್ಷಿಣ ಭಾರತದ ರಾಜ್ಯಗಳು
ಕಾಲ:
೧೭೮೦ – ೧೭೮೪
ಸ್ಥಳ:
ಮೈಸೂರು ಸಂಸ್ಥಾನ
ಪರಿಣಾಮ:
ಮಂಗಳೂರು ಒಪ್ಪಂದ
ಕದನಕಾರರು
ಮೈಸೂರು ಸಂಸ್ಥಾನ
ಬ್ರಿಟಿಷ್ ಸಾಮ್ರಾಜ್ಯ
ಸೇನಾಧಿಪತಿಗಳು
ಹೈದರ್ ಆಲಿ
ಪರಿವಿಡಿ
ಚಿತ್ತೂರಿನ ಪುನರ್‍ ಸ್ವಾಧೀನ
ಬದಲಾಯಿಸಿ
ಹೈದರಾಲಿಯ ಹಿರಿಯ ಮಗ , ಟಿಪ್ಪು ಸುಲ್ತಾನನು ೧೭೬೯-೭೨ರಲ್ಲಿ ನಡೆದ ಮೈಸೂರು ಮರಾಠಾ ಯುದ್ಧದಲ್ಲಿ ಅತೀವ ಆಸಕ್ತಿ ತೋರಿದ್ದನು. ೧೭೭೨ರಲ್ಲಿ ಪೇಶ್ವೆ ಮಾಧವರಾಯನು ಅಳಿದ ಮೇಲೆ, ಮರಾಠರು ಹೈದರನಿಂದ ಕಿತ್ತುಕೊಂಡಿದ್ದ ಪ್ರದೇಶಗಳನ್ನು ಮತ್ತೆ ವಾಪಸು ಗಳಿಸಿಕೊಳ್ಳಲು , ಮೈಸೂರಿನ ಉತ್ತರ ಭಾಗಕ್ಕೆ ಟಿಪ್ಪುವನ್ನು ಕಳುಹಿಸಲಾಯಿತು. ಎರಡನೆಯ ಮೈಸೂರು ಯುದ್ಧದ ಸಮಯದಲ್ಲಿಯಾಗಲೇ ಯುದ್ಧನೀತಿಯಲ್ಲೂ, ಮುತ್ಸದ್ದಿತನದಲ್ಲಿಯೂ ಟಿಪ್ಪು ಬಹಳಷ್ಟು ಪರಿಣತಿ ಸಂಪಾದಿಸಿದ್ದ. ೧೭೮೦ರ ಸೆಪ್ಟೆಂಬರಿನ ಪೊಳಿಲೂರಿನ ಯುದ್ಧದಲ್ಲಿ ಕರ್ನಲ್ ಬೈಲಿಯ ಸೈನ್ಯವನ್ನು ಬಗ್ಗುಬಡಿದನು. ಬ್ರಿಟೀಷರು ಭಾರತದಲ್ಲಿ ಎದುರಿಸಿದ ಮೊಟ್ಟಮೊದಲ ಮತ್ತು ಗಂಭೀರ ಸೋಲು ಇದಾಗಿತ್ತು. ಸಂಪೂರ್ಣ ಬ್ರಿಟೀಷ್ ಸೇನೆ ಹತವಾಯಿತು ಅಥವಾ ಸೆರೆ ಸಿಕ್ಕಿತು. ಇದ್ದ ೮೬ ಸೇನಾಧಿಕಾರಿಗಳಲ್ಲಿ ೩೬ ಜನ ಸತ್ತರು. ಸೆರೆ ಸಿಕ್ಕ ೩೮೨೦ ಸೈನಿಕರಲ್ಲಿ ೫೦೮ ಯೂರೋಪಿಯನ್ನರಿದ್ದರು. ಕರ್ನಲ್ ಬೈಲೀ ಸ್ವತಃ ಸೆರೆಸಿಕ್ಕಿದ. ಇದರಿಂದ ಬ್ರಿಟೀಷರಲ್ಲಿ ಉಂಟಾದ ತಲ್ಲಣದ ಪರಿಣಾಮವಾಗಿ ಮದರಾಸಿನ ಬ್ಲಾಕ್ ಟೌನ್ ಅರ್ಧಕ್ಕರ್ಧ ಖಾಲಿಯಾಯಿತು. ಭಾರತದ ಮೂರು ಮಹಾರಾಜರು, ಮೊಘಲ್ ಚಕ್ರವರ್ತಿ ಶಾ ಅಲಂ, ಔಂಧಿನ ನವಾಬ ಶುಜಾ ಉದ್ದೌಲಾ ಮತ್ತು ಬಂಗಾಳದ ನವಾಬ ಮೀರ್‍ ಕಾಸೀಮರನ್ನು ಒಂದೇ ಯುದ್ಧದಲ್ಲಿ ಸೋಲಿಸಿದ್ದ , ಬಕ್ಸಾರ್‍ ಯುದ್ಧದ ವೀರ, ಸರ್‍ ಹೆಕ್ಟರ್‍ ಮನ್ರೋ ಟಿಪ್ಪುವಿನ ಎದುರು ಬರಲಿಲ್ಲ. ತನ್ನೆಲ್ಲ ಫಿರಂಗಿಗಳನ್ನು ಕಾಂಜೀವರಂನ ಕೆರೆಯಲ್ಲಿ ಎಸೆದು ಆತ ಮದರಾಸು ಬಿಟ್ಟು ಪರಾರಿಯಾದ. ೧೭೮೨ರ ಫೆಬ್ರುವರಿ ೧೮ರಂದು ಟಿಪ್ಪು ಕರ್ನಲ್ ಬ್ರೈತ್ ವೈಟನನ್ನು ತಂಜಾವೂರಿನ ಹತ್ತಿರದ ಅನ್ನಗುಡಿ ಎಂಬಲ್ಲಿ ಸೋಲಿಸಿದ.ಬ್ರಿಟೀಷ್ ಸೈನ್ಯದಲ್ಲಿ ೧೦೦ ಯೂರೋಪಿಯನ್ನರೂ, ೩೦೦ಅಶ್ವಸೈನಿಕರೂ, ೧೪೦೦ ಕಾಲಾಳುಗಳೂ ಮತ್ತು ೧೪ ಇತರ ಶಸ್ತ್ರಾಸ್ತ್ರಗಳೂ ಇದ್ದವು . ಎಲ್ಲಾ ಸೈನಿಕರನ್ನು ಸೆರೆ ಹಿಡಿದ ಟಿಪ್ಪು, ಶಸ್ತ್ರಾಸ್ತ್ರಗಳನ್ನೂ ವಶಪಡಿಸಿಕೊಂಡ. ಆಗ ಸಾಮಾನ್ಯವಾಗಿದ್ದ, ಕೆಲವೇ ನೂರು ಯೂರೋಪಿಯನ್ ಸೈನಿಕರ ತುಕಡಿಗಳು ಹೈದರ್‍ ಮತ್ತು ಟಿಪ್ಪು ಬರುವವರೆಗೆ ಭಾರತಲ್ಲಿ ವ್ಯಾಪಕ ಹಾನಿಯೆಸಗಿದ್ದವು. ೧೭೮೧ರ ಡಿಸೆಂಬರಿನಲ್ಲಿ ಟಿಪ್ಪು ಬ್ರಿಟೀಷರಿಂದ ಚಿತ್ತೂರನ್ನು ಯಶಸ್ವಿಯಾಗಿ ಗೆದ್ದುಕೊಂಡ. ಈ ಎಲ್ಲ ಯುದ್ಧಗಳಿಂದ , ಡಿಸೆಂಬರಿ ೧೭೮೨ರಲ್ಲಿ ಹೈದರ್‍ ಕೊನೆಯುಸಿರೆಳೆಯುವ ವೇಳೆಗಾಗಲೇ ಟಿಪ್ಪು ಸಾಕಷ್ಟು ಯುದ್ಧಾನುಭವ ಗಳಿಸಿಕೊಂಡಿದ್ದ.
ಮಂಗಳೂರಿನ ಒಪ್ಪಂದ
ಬದಲಾಯಿಸಿ
ಮಂಗಳೂರಿನ ಒಪ್ಪಂದದೊಂದಿಗೆ ಎರಡನೆರಯ ಮೈಸೂರು ಯುದ್ಧ ಕೊನೆಗೊಂಡಿತು. ಭಾರತದ ಇತಿಹಾಸದಲ್ಲಿ ಇದೊಂದು ಮುಖ್ಯ ದಾಖಲೆ. ಭಾರತದ ವ್ಯಕ್ತಿಯೊಬ್ಬ ಬ್ರಿಟಿಷರಿಗೆ ಪಾಠ ಕಲಿಸಿ, ಅವರನ್ನು ದೀನ ಸ್ಥಿತಿಗೆ ತಂದದ್ದು ಇದೇ ಕೊನೆಯ ಬಾರಿಯಾಗಿತ್ತು. ವಾರನ್ ಹೇಸ್ಟಿಂಗ್ಸ್ ಇದನ್ನು ಅವಮಾನಕಾರೀ ಶಾಂತಿಸ್ಥಾಪನೆ ಎಂದು ಕರೆದು, ”ಬ್ರಿಟೀಷ್ ದೇಶದ ವಿಶ್ವಾಸ ಮತ್ತು ಗೌರವವನ್ನು ಭಂಗಿಸಿದ” ಮದರಾಸು ಸರಕಾರಕ್ಕೆ ತಕ್ಕ ಶಿಕ್ಷೆ ನೀಡುವಂತೆ ಬಬ್ರಿಟನ್ನಿನ ರಾಜನಿಗೂ, ಪಾರ್ಲಿಮೆಂಟಿಗೂ ಆಗ್ರಹಿಸಿದ. ಈ ಸೋಲಿನಿಂದ ಮುಖಭಂಗಿತರಾದ ಬ್ರಿಟೀಷರು ಅಂದಿನಿಂದಲೇ ಅಂದರೆ ೧೭೮೪ರ ಮಾರ್ಚ್ ೧೧ ರಿಂದ ಟಿಪ್ಪುವಿನ ಶಕ್ತಿಹರಣಕ್ಕೆ ತೀವ್ರ ಪ್ರಯತ್ನ ನಡೆಸಿದರು. ಮಂಗಳೂರಿನ ಒಪ್ಪಂದ ಟಿಪ್ಪುವಿನ ಮುತ್ಸದ್ದಿನತನಕ್ಕೆ ಸಾಕ್ಷಿಯಾಗಿದೆ.ದೀರ್ಘ ಯುದ್ಧವನ್ನು ಯಶಸ್ವಿಯಾಗಿ ಮುಗಿಸಿದ್ದಷ್ಟೇ ಅಲ್ಲ, ಉತ್ತರದ ಪ್ರದೇಶಗಳ ಮೇಲೆ ಕಣ್ಣಿಟ್ಟಿದ್ದ ಮರಾಠರ ಪ್ರಯತ್ನಗಳನ್ನೂ ಅವನು ವಿಫಲಗೊಳಿಸಿದನು.[೧] [೨]
ನೋಡಿ
ಬದಲಾಯಿಸಿ
ಒಂದನೆಯ ಮೈಸೂರು ಯುದ್ಧ |
ಎರಡನೆಯ ಮೈಸೂರು ಯುದ್ಧ |
ಮೂರನೇ ಮೈಸೂರು ಯುದ್ಧ |
ನಾಲ್ಕನೆಯ ಮೈಸೂರು ಯುದ್ಧ |
ಟಿಪ್ಪು ಸುಲ್ತಾನ್ |
ಲಾರ್ಡ್ ಕಾರ್ನ್‍ವಾಲಿಸ್
ಉಲ್ಲೇಖ
ಬದಲಾಯಿಸಿ
ಹಿಂದೂದೇಶದ ಚರಿತ್ರೆ ಲೇಖಕರು:ಇ.ಡಬ್ಳ್ಯು.ಥಾಂಸನ್. ಅನುವಾದಕರರು: ಕೆ.ವಿ.ದೊರೆಸ್ವಾಮಿ ಲೆಕ್ಚರರ್ ಮೈಸೂರು.
ವಿಕಿಪೀಡಿಯ
ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ.
ಖಾಸಗಿ ಮಾಹಿತಿಯ ಬಗ್ಗೆ ನಿಲುವು ಬಳಕೆಯ ನಿಬಂಧನೆಗಳುಡೆಸ್ಕ್‌ಟಾಪ್
ವಿಕಿಪೀಡಿಯ
ವಿಕಿಪೀಡಿಯ ಅನ್ನು ಹುಡುಕಿ
[ಮರೆಮಾಡಲು]
ಬರೆಯುವಾಗ ಕೀಲಿಮಣೆ ಐಕಾನ್ ಒತ್ತಿ ಕನ್ನಡ ಆಯ್ದುಕೊಳ್ಳುವುದರ ಅಥವಾ Ctrl+M ಒತ್ತುವುದರ ಮೂಲಕ ಈಗ ನೇರವಾಗಿ ಕನ್ನಡದಲ್ಲಿ ಬರೆಯಬಹುದು! ವಿವರಗಳಿಗೆ ಈ ಪುಟ ನೋಡಿ.
ಒಂದನೆಯ ಮೈಸೂರು ಯುದ್ಧ
ಒಂದು ಸಂಘರ್ಷ ಭಾರತದಲ್ಲಿ ಮೈಸೂರು ಸುಲ್ತಾನರ ಮತ್ತು ಈಸ್ಟ್ ಇಂಡಿಯಾ ಕಂಪನಿ ನಡುವೆ